Lok Sabha Elections 2024: ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ; ರಾಜಕಾರಣಿಗಳು ನೀರಿನ ವ್ಯವಸ್ಥೆ ಮಾಡುವಂತಿಲ್ಲ
ಭಾರತ, ಮಾರ್ಚ್ 16 -- ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ಕೂಡಲೇ ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿರುವ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಮತ್ತು ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳನ್ನು ಕೂಡಲೇ ತೆಗೆದು ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪೋಸ್ಟರ್, ಬ್ಯಾನರ್ ಫ್ಲೆಕ್ಸ್, ಭಿತ್ತಿಪತ್ರಗಳು, ಗೋಡೆ ಬರಹಗಳು ಇರುವ ಹಾಗಿಲ್ಲ. ಒಂದು ವೇಳೆ ಪೋಸ್ಟರ್, ಬ್ಯಾನರ್ ಹಾಕಿದ್ದರೆ ಹಾಕಿದವರ ಮೇಲೆ ದೂರು ದಾಖಲಿಸಬೇಕು.
ರಸ್ತೆ ಬದಿ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು ತೆಗೆಯಬೇಕು. ಯಾವುದೇ ಸ್ಥಳದಲ್ಲಿ ಜನಪ್ರತಿನಿಧಿಗಳ...
Click here to read full article from source
To read the full article or to get the complete feed from this publication, please
Contact Us.