Bengaluru, ಮೇ 11 -- ʻಕಾಮಿಡಿ ಕಿಲಾಡಿಗಳುʼ ಖ್ಯಾತಿಯ ಮಡೆನೂರು ಮನು ನಾಯಕನಾಗಿ ನಟಿಸಿರುವ 'ಕುಲದಲ್ಲಿ ಕೀಳ್ಯಾವುದೋ' ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಬ್ಬರದ ಪ್ರಚಾರ ಕಾರ್ಯದಲ್ಲಿಯೂ ಚಿತ್ರತಂಡ ತೊಡಗಿಸಿಕೊಂಡಿದೆ. ಈ ನಡುವೆ ಈ ಚಿತ್ರದಲ್ಲಿ ಬರುವ ಲಾಭದಲ್ಲಿ ಶೇ. 30ರಷ್ಟು ಹಣವನ್ನು ಸೈನಿಕರ ನಿಧಿಗೆ ಕೊಡುವುದಾಗಿ ನಿರ್ಮಾಪಕ ಸಂತೋಷ್ ಹೇಳಿಕೊಂಡಿದ್ದಾರೆ. 'ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಟ್ರೇಲರ್ ಶನಿವಾರ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದವರು ಯೋಧರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಸಂತೋಷ್ ಕುಮಾರ್, ʻಈ ಉದ್ವಿಗ್ನ ಪರಿಸ್ಥಿತಿಯಲ್ಲಿ ಚಿತ್ರ ಬಿಡುಗಡೆ ಮಾಡುತ್ತಿದ್ದೇವೆ. ಕದನ ವಿರಾಮ ಇದ್ದರೂ, ಯಾವ ಕ್ಷಣದಲ್ಲಿ ಏನಾಗುತ್ತದೆ ಎಂದು ಗೊತ್ತಿಲ್ಲ. ಈ ಪರಿಸ್ಥಿತಿಯಲ್ಲಿ ಚಿತ್ರ ಬಿಡುಗಡೆ ಮಾಡಬೇಕಾ? ಎಂದು ಸಾಕಷ್ಟು ಜನರನ್ನು ಕೇಳಿದ್ದೇವೆ. ಇದರಿಂದ ಏನೂ ಆಗುವುದಿಲ್ಲ, ಇದು ಎಲ್ಲರಿಗೂ ಕನೆಕ್ಟ್ ಆಗುವ ಸಿನಿಮಾ, ಒಳ್ಳೆಯ ಸಂದೇಶವಿರುವುದರಿಂದ ಎಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.