Bengaluru, ಮೇ 6 -- ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಣ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಯಾವುದೇ ಸಂದರ್ಭದಲ್ಲಿ ಯುದ್ಧ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಹೊಸ ಮತ್ತು ಸಂಕೀರ್ಣ ಬೆದರಿಕೆಗಳ ವಿರುದ್ಧ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಯುದ್ಧ ಅಭ್ಯಾಸಗಳನ್ನು ನಡೆಸುವಂತೆ ಗೃಹ ಸಚಿವಾಲಯ ಸೋಮವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ಮಧ್ಯೆ ಈ ನಿರ್ದೇಶನ ಬಂದಿದೆ. ಹೀಗಾಗಿ ಮೇ 7 ರಂದು ದೇಶಾದ್ಯಂತ ಆಯ್ದ 244 ಜಿಲ್ಲೆಗಳಲ್ಲಿ ಈ ಅಭ್ಯಾಸಗಳನ್ನು ನಡೆಸಲಾಗುವುದು ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
ಅಣಕು ಯುದ್ಧ ತಾಲೀಮಿನ ಭಾಗವಾಗಿ, ವಾಯು-ದಾಳಿ ಎಚ್ಚರಿಕೆ ಸೈರನ್ಗಳ ಕಾರ್ಯಾಚರಣೆಗೆ ಸನ್ನದ್ಧತೆಯನ್ನು ಪರಿಶೀಲಿಸುವುದು ಮತ್ತು ಪ್ರತಿಕೂಲ ದಾಳಿ ಸಂದರ್ಭದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ನಾಗರಿಕರಿಗೆ ಅಗತ್ಯ ಮತ್ತು ಸೂಕ್ತ ನಾಗರಿಕ ರಕ್ಷಣಾ ಅಂಶಗಳ ಬಗ್ಗೆ ತರಬೇತಿ ನೀಡಬೇಕು ಎಂದು ಗೃಹ ಸ...
Click here to read full article from source
To read the full article or to get the complete feed from this publication, please
Contact Us.