ಭಾರತ, ಮೇ 7 -- ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತದ ಸೇನೆ ಬುಧವಾರ (ಮೇ 7) ತಡರಾತ್ರಿ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತದ ನಡೆಸಿದ ದಾಳಿಗೆ ಅಪರೇಷನ್ ಸಿಂಧೂರ್ ಎಂದು ಹೆಸರು ನೀಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಒಟ್ಟು 9 ಉಗ್ರರ ನೆಲೆಗಳನ್ನು ನಾಶಪಡಿಸಿದೆ.

ಅಪರೇಷನ್ ಸಿಂಧೂರ್‌ ವಿಚಾರವಾಗಿ ಇಂದು ಸಿಎಂ ತಮ್ಮ ನಿವಾಸ ಕಾವೇರಿಯಲ್ಲಿ ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ಪತ್ರಿಕಾಗೋಷ್ಠಿ ಕೇಂದ್ರದ ನಡೆಗೆ ಮೆಚ್ಚುಗೆ ಸೂಚಿಸಿದ ಸಿಎಂ ಕೇಂದ್ರ ಕರ್ನಾಟಕ ಸರ್ಕಾರದ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ. ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ ಪ್ರಮುಖ ಅಂಶಗಳಿವು. ಪತ್ರಿಕಾಗೋಷ್ಠಿ ವೇಳೆ ಸಿಎಂ ಸಿದ್ದರಾಮಯ್ಯ ಅಗಲವಾಗ ಕೆಂಪು ತಿಲಕ ಇರಿಸಿಕೊಂಡಿದ್ದು ಗಮನ ಸೆಳೆಯಿತು.

Published by HT Digital Content Services with permission from HT Kanna...