ಭಾರತ, ಏಪ್ರಿಲ್ 30 -- ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ 20 ಅಡಿ ಉದ್ದದ ಗೋಡೆ ಕುಸಿದ ಪರಿಣಾಮವಾಗಿ ಈ ದುರ್ಘಟನೆ ಜರುಗಿದೆ. ದೇವಾಲಯದ 300 ರೂ. ಟಿಕೆಟ್ ಸರತಿ ಸಾಲಿನ ಈ ಗೋಡೆಯನ್ನು 20 ದಿನಗಳ ಹಿಂದೆ ನಿರ್ಮಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಅವಶೇಷಗಳಡಿಯಿಂದ ಭಕ್ತರನ್ನು ಕಾಪಾಡಲು ಯತ್ನಿಸಿವೆ. ಗಾಯಗೊಂಡ ಭಕ್ತರನ್ನು ಚಿಕಿತ್ಸೆಗಾಗಿ ಕಿಂಗ್ ಜಾರ್ಜ್ ಆಸ್ಪತ್ರೆಗೆ (ಕೆಜಿಹೆಚ್) ದಾಖಲಿಸಲಾಗಿದೆ.
ಘಟನೆಗೆ ಕಾರಣ ಏನೆಂದು ಇನ್ನೂ ಸ್ಪಷ್ಟವಾಗಿಲ್ಲ. "ಬೆಳಗ್ಗಿನ ಜಾವ 2:30 ರಿಂದ 3:30ರವರೆಗೆ ಧಾರಾಕಾರ ಮಳೆಯಾಗಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ...
Click here to read full article from source
To read the full article or to get the complete feed from this publication, please
Contact Us.