Bengaluru, ಮೇ 19 -- ಮಂಗಳೂರು: ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಸಾವು ಪ್ರಕರಣದಲ್ಲಿ ಪ್ರೇಮ ವೈಫಲ್ಯದ ಕಾರಣದಿಂದ ಅತ್ಮಹತ್ಯೆಗೆ ಶರಣಾಗಿದ್ದಾಗಿ ಪಂಜಾಬ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಆಕಾಂಕ್ಷ ಆತ್ಮಹತ್ಯೆ ಮಾಡಿಕೊಂಡದ್ದಲ್ಲ ಎಂದು ಹೇಳಿರುವ ಪೋಷಕರು ಆಕೆಯನ್ನು ಕೊಂದಿರಲೂಹುದು ಎಂದು ಅನುಮಾನ ವ್ಯಕ್ತಪಡಿಸಿದ್ದು , ಈ ಕುರಿತು ದೂರನ್ನೂ ನೀಡಿದ್ದಾರೆ. ಮೃತಳ ಮನೆಯವರಿಂದ ಮತ್ತೊಂದು ದೂರನ್ನು ಪೊಲೀಸರು ಸ್ವೀಕರಿಸಿದ್ದು, ಯಾವ ರೀತಿ ತನಿಖೆ ಸಾಗುತ್ತದೆ ಎಂದು ಕಾದುನೋಡಬೇಕು. ಈ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಮರಣೋತ್ತರ ಪರೀಕ್ಷೆ ನಿಗದಿತ ಸಮಯಕ್ಕೆ ಆರಂಭಗೊಂಡಿಲ್ಲ.

ಘಟನೆ: ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣದಂತೆ ಪಂಜಾಬ್ ಜಿಲ್ಲೆಯ ಪಗ್ವಾಡದಲ್ಲಿರುವ ಎಲ್.ಪಿ.ಯು(Lovely Professional University) ಮೆಂಟರ್ ಪ್ರೊಫೆಸರ್ ಎರಡು ಮಕ್ಕಳ...