Bangalore, ಮೇ 1 -- ಬೆಂಗಳೂರು: ಕೇಂದ್ರ ಸರ್ಕಾರದ ಮೋಟಾರು ಕಾಯಿದೆ ಅಡಿ ಉಬರ್‌, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅವಕಾಶ ಇಲ್ಲದೇ ಇರುವ ಜತೆಗೆ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಆಟೋರಿಕ್ಷಾವನ್ನೇ ನಂಬಿ ಬದುಕು ನಡೆಸುತ್ತಿರುವ ಸಹಸ್ರಾರು ಮಂದಿ ಕುಟುಂಬಗಳಿಗೆ ಹೊಡೆತ ಬೀಳಲಿದೆ. ಕಾನೂನಾತ್ಮಕವಾಗಿ ಹಾಗೂ ಸಾಮಾಜಿಕವಾಗಿಯೂ ಉಬರ್‌ ಹಾಗೂ ರ‍್ಯಾಪಿಡೋ ಬೈಕ್ ಟ್ಯಾಕ್ಸಿಯಿಂದ ತೊಂದೆಯಾಗುತ್ತಿದೆ. ಇದನ್ನು ನಿಲ್ಲಿಸುವುದು ಸೂಕ್ತ ಎಂದು ಕರ್ನಾಟಕ ಸಾರಿಗೆ ಇಲಾಖೆ ಕಳೆದ ವಾರವೇ ಆದೇಶ ಹೊರಡಿಸಿದೆ. ಇದರ ನಡುವೆ ಕರ್ನಾಟಕದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಬರುವ ಜೂನ್ 15ರವರೆಗೂ ವಿಸ್ತರಣೆ ಮಾಡಿ ಕರ್ನಾಟಕ ರಾಜ್ಯ ಹೈಕೋರ್ಟ್‌ ತೀರ್ಪು ನೀಡಿದೆ. ಇದರಿಂದ ಇನ್ನೂ ಕೆಲವು ದಿನಗಳ ಕಾಲ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಯಲಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್‌ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್...