ಭಾರತ, ಮಾರ್ಚ್ 8 -- ಮಂಡ್ಯ: ನಾಗಮಂಗಲ ತಾಲೂಕಿನ ಐತಿಹಾಸಿಕ ಆದಿಚುಂಚನಗಿರಿ ಜಾತ್ರೆ ಅದ್ದೂರಿಯಾಗಿ ಆರಂಭಗೊಂದಿದೆ. ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಧರ್ಮಧ್ವಜಾರೋಹಣ ಮತ್ತು ನಾಂದಿ ಪೂಜೆಗಳನ್ನು ನೆರವೇರಿಸುವ ಮೂಲಕ ಶುಕ್ರವಾರ (ಮಾರ್ಚ್ 7) ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಆದಿ ಚುಂಚನಗಿರಿ ಮಠದಲ್ಲಿ 9 ದಿನಗಳ ಕಾಲ ಸಂಭ್ರಮದ ಜಾತ್ರೆ ನಡೆಯಲಿದ್ದು, ಮೊದಲನೇ ದಿನ ಗಂಗಾಧರೇಶ್ವರ ಸ್ವಾಮಿ, ಶ್ರೀಕಾಲಭೈರವೇಶ್ವರ ಸ್ವಾಮಿ ಮತ್ತು ಬಾಲಗಂಗಾಧರನಾಥ ಸ್ವಾಮೀಜಿ ಗದ್ದುಗೆ ಸೇರಿದಂತೆ ಕ್ಷೇತ್ರದ ಎಲ್ಲಾ ದೇವಾಲಯಗಳಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು.
ಮಾರ್ಚ್ 7ರಂದು ಆರಂಭವಾದ ಜಾತ್ರೆ 15ರವರೆಗೂ ನಡೆಯಲಿದೆ. 9 ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಪೂಜಾ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಜಾತ್ರೆ ಅಂಗವಾಗಿ ಕ್ಷೇತ್ರದ ದೇವಾಲಯಗಳನ್ನು ಸಿಂಗರಿಸಲಾಗಿದೆ. ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಎಲ್ಲೆಡೆ ಹಬ್ಬದ ವಾತಾವರಣವಿದೆ. ಜಾತ್ರೆಗೆ ಬರುವ ಭಕ್ತರಿಗಾಗಿ ...
Click here to read full article from source
To read the full article or to get the complete feed from this publication, please
Contact Us.