Bangalore, ಮೇ 8 -- ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿರುವ ದೇವೇಗೌಡರು; ಮೇ 7ರಂದು ಪಹಲ್ಗಾಮ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಪ್ರತಿಕ್ರಿಯೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಪ್ರಬುದ್ದ ನಾಯಕತ್ವದಲ್ಲಿ ಒತ್ತಡದ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸುತ್ತಿರುವ ರೀತಿ, ಭಾರತದ ಹಿತ ರಕ್ಷಣೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಿಗುತ್ತಿರುವ ಬೆಂಬಲವೆಲ್ಲವೂ ನಿಮ್ಮ ನಾಯಕತ್ವದ ಫಲವೇ ಹೌದು ಎಂದೂ ದೇವೇಗೌಡರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

"ಸೌದಿ ಅರೇಬಿಯಾ ಭೇಟ...