ಭಾರತ, ಮೇ 7 -- ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಇಂದು (ಮೇ 7) ನಸುಕಿನ ವೇಳೆ ಉಗ್ರ ನಿಗ್ರಹದ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನಕ್ಕೆ ಹಾಗೂ ಪಾಕ್ ಆಕ್ರಮಿತ ಜಮ್ಮು ಕಾಶ್ಮಿರಕ್ಕೆ ನುಗ್ಗಿ 9 ಉಗ್ರ ನೆಲೆಗಳನ್ನು ನಾಶ ಮಾಡಿತು. ಇದರ ಬೆನ್ನಿಗೆ ಕರ್ನಾಟಕ ಕಾಂಗ್ರೆಸ್ "ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ- ಮಹಾತ್ಮ ಗಾಂಧಿ" ಎಂಬ ಕೋಟ್ ಅನ್ನು ಟ್ವೀಟ್ ಮಾಡಿ ಪೇಚಿಗೆ ಸಿಲುಕಿತು. ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಅವರು, ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಆಪರೇಷನ್ ಸಿಂದೂರ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಿದೆ" ಎಂದು ಟ್ವೀಟ್ ಮಾಡಿದರು.

ಪಹಲ್ಗಾಮ್ ಉಗ್ರ ದಾಳಿಗೆ ದೇಶ ಪ್ರತೀಕಾರ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿರುವಾಗ 'ಶತ್ರುಗಳ ಶುಭಚಿಂತಕರಂತೆ', ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಪಾಕಿಸ್ತಾನದೊಂದಿಗಿರುವ 'ನೆಂಟಸ್ಥನ" 'ಅವಿನಾಭಾವ' ಸಂಬಂಧವನ್ನು ಜಗಜ್ಜಾಹೀರು ಮಾಡಿದೆ. ಈ ರೀ...