Bengaluru, ಮೇ 9 -- ನವದೆಹಲಿ: ಪೆಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಕೈಗೊಂಡ ಆಪರೇಷನ್ ಸಿಂದೂರ್ ಉಗ್ರ ನಿಗ್ರಹ ಕಾರ್ಯಾಚರಣೆಯಿಂದ ಕಂಗೆಟ್ಟಿರುವ ಪಾಕಿಸ್ತಾನ, ಮತ್ತೆ ಭಾರತದ ಸೇನಾ ನೆಲೆಗಳು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರಿಸಿದೆ. ಅದಕ್ಕಾಗಿ ಡ್ರೋನ್ ಮತ್ತು ಕ್ಷಿಪಣಿಗಳನ್ನು ಪಾಕಿಸ್ತಾನ ಬಳಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಪಾಕಿಸ್ತಾನದ ಅನೇಕ ದಾಳಿಗಳನ್ನು ಭಾರತೀಯ ಸೇನೆ ಗುರುವಾರ ರಾತ್ರಿ ಹಿಮ್ಮೆಟ್ಟಿಸಿದೆ ಮತ್ತು ದೇಶದ ಪಶ್ಚಿಮ ಗಡಿಯುದ್ದಕ್ಕೂ ವಿವಿಧ ನಿರ್ಬಂಧವನ್ನು ವಿಧಿಸಿದೆ.

ಭಾರತೀಯ ವಾಯುಮಿತಿಯೊಳಗೆ ನುಸುಳಲು ಯತ್ನಿಸಿದ ಎಫ್ -16 ಸೇರಿದಂತೆ ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಮತ್ತು ಕನಿಷ್ಠ ಒಬ್ಬ ಪೈಲಟ್ ಅನ್ನು ಭಾರತೀಯ ಪಡೆಗಳು ಸೆರೆಹಿಡಿದಿವೆ ಎಂದು ವರದಿಯಾಗಿದೆ. ಪಾಕಿಸ್ತಾನದ ದಾಳಿಗೆ ಪ್ರತಿಕ್ರಿಯೆಯಾಗಿ ಸಿಯಾಲ್ಕೋಟ್, ಲಾಹೋರ್ ಮತ್ತು ಇಸ್ಲಾಮಾಬಾದ್‌ನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಲು ಭಾರತವು ಡ್ರ...