Bengaluru, ಮೇ 8 -- ಬೆಂಗಳೂರು: ಬುಧವಾರ ಆಪರೇಷನ್ ಸಿಂದೂರ ನಡೆದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭದ್ರತಾ ಕಾರಣಕ್ಕೆ ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಏರ್ ಇಂಡಿಯಾ ವಿಮಾನದಿಂದ ಒಬ್ಬ ಪ್ರಯಾಣಿಕನನ್ನು ಕೆಳಗಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.
ಈ ಪ್ರಯಾಣಿಕ ಬೆಂಗಳೂರಿನಿಂದ ನವದೆಹಲಿಗೆ AI-2820 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಬುಧವಾರ ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಗುರುತು ಬಹಿರಂಗಪಡಿಸದ ಕಾರಣಕ್ಕೆ ಅವರನ್ನು ಕೆಳಗಿಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಮಗೆ ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಯಾವುದೇ ವಿವರಗಳನ್ನು ಹಂಚಿಕೊಳ್ಳುವಂತಿಲ್ಲ.ಪ್ರಯಾಣಿಕನನ್ನು ಕೆಳಗಿಳಿಸಿದ್ದೇವೆ ಎಂದರೆ ಅದಕ್ಕೊಂದು ನಿರ್ದಿಷ್ಟ ಕಾರಣವಿರುತ್ತದೆ. ಆ ಕಾರಣವನ್ನು ನಾವು ಬಹಿರಂಗಪಡಿಸುವಂತಿಲ್ಲ ಎಂದು ಏರ್ ಇಂಡಿಯಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published by HT...
Click here to read full article from source
To read the full article or to get the complete feed from this publication, please
Contact Us.