ಭಾರತ, ಮೇ 7 -- ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತದ ಸೇನೆ ಬುಧವಾರ (ಮೇ 7) ತಡರಾತ್ರಿ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತದ ನಡೆಸಿದ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರು ನೀಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಒಟ್ಟು 9 ಉಗ್ರರ ನೆಲೆಗಳನ್ನು ನಾಶಪಡಿಸಿದೆ.

ಆಪರೇಷನ್ ಸಿಂಧೂರ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಪತ್ರಿಕಾಗೋಷ್ಠಿ ಕೇಂದ್ರದ ನಡೆಗೆ ಮೆಚ್ಚುಗೆ ಸೂಚಿಸಿದ ಸಿಎಂ ಕೇಂದ್ರಕ್ಕೆ ಕರ್ನಾಟಕ ಸರ್ಕಾರದ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ. ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ ಪ್ರಮುಖ ಅಂಶಗಳ ಬಗ್ಗೆ ಇಲ್ಲಿದೆ ಮಾಹಿತಿ. ಪತ್ರಿಕಾಗೋಷ್ಠಿ ವೇಳೆ ಸಿಎಂ ಸಿದ್ದರಾಮಯ್ಯ ಅಗಲವಾದ ಕೆಂಪು ತಿಲಕ ಇರಿಸಿಕೊಂಡಿದ್ದು ಗಮನ ಸೆಳೆಯಿತು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಪ್ರೊಫೈಲ್ ಫೋಟೊಗೆ 'ಸಿಂಧೂರ': ಸಾಮಾಜಿಕ ಮಾ...