ಭಾರತ, ಮೇ 7 -- ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ನಾಗರಿಕರನ್ನು ಹತ್ಯೆ ಮಾಡಿದ್ದ ಉಗ್ರರ ಕೃತ್ಯಕ್ಕೆ ಭಾರತ ಸೇಡು ತೀರಿಸಿಕೊಂಡಿದೆ. ಉಗ್ರರ ದಾಳಿ ನಡೆದ 15 ದಿನಗಳ ಅಂತರದಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಅಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಇದ್ದ ಉಗ್ರರ 9 ತಾಣಗಳನ್ನು ಭಾರತೀಯ ವಾಯು ಸೇನೆ ಇಂದು (ಮೇ 7, ಬುಧವಾರ) ತಡರಾತ್ರಿ ದಾಳಿ ಮಾಡಿ ನಾಶಪಪಡಿಸಿದೆ. ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದಿತ್ತು.

ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ವಾಯು ದಾಳಿ ನಡೆಸಿದೆ. ಸಶಸ್ತ್ರ ಪಡೆಗಳು ನಡೆಸಿರುವ ಈ ದಾಳಿಯ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ, ಮಹಿಳಾ ಸೇನಾಧಿಕಾರಿಗಳಾದ ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕ ಸಿಂಗ್ ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪೈಕಿ ವಾಯು ಸೇನೆಯ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕ ಸಿಂಗ್ ಯಾರು ಎಂಬುದನ್ನು ಇಲ್ಲಿ ತಿಳಿಯೋಣ.

ಆಪರೇ...