Vijayapura, ಮೇ 29 -- ವಿಜಯಪುರ: ಮಹಾರಾಷ್ಟ್ರದಲ್ಲಿ ಸತತ ಒಂದು ವಾರದಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮವಾಗಿ ಉತ್ತರ ಕರ್ನಾಟಕದ ಪ್ರಮುಖ ಜಲಾಶಯದ ಆಲಮಟ್ಟಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ನೀರಿನ ಒಳಹರಿವು ಹೆಚ್ಚುವ ಮುನ್ಸೂಚನೆ ಇರುವ ಕಾರಣದಿಂದಾಗಿ ಕೃಷ್ಣಾ ನದಿ ಮೂಲಕ ಹೊರಹರಿವನ್ನು ಆರಂಭಿಸಲು ನಿರ್ಧರಿಸಲಾಗಿದೆ. ಮೊದಲು ಹತ್ತು ಸಾವಿರ ಕ್ಯೂಸೆಕ್‌ ನೀರನ್ನು ಹೊರಕ್ಕೆ ಹರಿಸಿ ನಂತರ ಅದನ್ನು ಹೆಚ್ಚಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

Published by HT Digital Content Services with permission from HT Kannada....