ಭಾರತ, ಮೇ 16 -- ನಿರ್ದೇಶಕ ಡಾ.ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಎಸ್ ನಾರಾಯಣ್ ಅವರೆ ಬರೆದು, ರಾಗ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ "ಮಾರುತ" ಚಿತ್ರದ ಮೊದಲ ಹಾಡು ಜನಮನಸೂರೆಗೊಂಡಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

ಇಂದು ನಮ್ಮ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ. "ಮಾರುತ" ಶೀರ್ಷಿಕೆ ಹೇಗೆ ಬಂತು ಅಂತ ನಿರ್ಮಾಪಕ ಕೆ.ಮಂಜು ಕೇಳಿದ್ದರು. ದುನಿಯಾ ವಿಜಯ್ ಚಿತ್ರತಂಡಕ್ಕೆ ಬರುವವರೆಗೂ ಈ ಶೀರ್ಷಿಕೆ ಬಂದಿರಲಿಲ್ಲ. ಅವರು ಬಂದ ನಂತರ "ಮಾರ...