Mangalore, ಮೇ 2 -- ಮಂಗಳೂರು: ಮಂಗಳೂರು ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಕಿನ್ನಿಪದವಿನಲ್ಲಿ ಐದಾರು ಮಂದಿಯ ತಂಡ ನಡುರಸ್ತೆಯಲ್ಲೇ ಹಿಂದು ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್ ಶೆಟ್ಟಿ (32) ಎಂಬಾತನನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮೇ 2ರ ಶುಕ್ರವಾರದಂದು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿದೆ. ಈ ಕುರಿತು ಮುಖಂಡ ಶರಣ್ ಪಂಪ್ ವೆಲ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಾಕಿಕೊಂಡಿದ್ದು, ಮಾಧ್ಯಗೋಷ್ಠಿಯಲ್ಲೂ ತಿಳಿಸಿದ್ದಾರೆ.ಬಂದ್‌ಗೆ ಕರೆ ನೀಡಿರುವ ನಡುವೆಯೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರು ಕರಾವಳಿ ಭಾಗದಲ್ಲಿ ಭಾರೀ ಕಟ್ಟೆಚ್ಚರ ವಹಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಕೆಲ ದಿನಗಳ ನಂತರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕನೊಬ್ಬನನ್ನು ಕೊಲೆ ಮಾಡಲಾಗಿತ್ತು. ಇದಾದ ನಂತರ ಸುಹಾಸ್‌ಶೆಟ್ಟಿ ಎಂಬಾತನನ್ನು ಗುರುವಾರ ರಾತ್ರ...