ಭಾರತ, ಮಾರ್ಚ್ 7 -- ಬೆಂಗಳೂರು: ಕರ್ನಾಟಕ ವಿಧಾನ ಮಂಡಲ ಅಧಿವೇಶನ ಈಗಾಗಲೇ ಆರಂಭವಾಗಿದ್ದು, ಇಂದು (ಮಾರ್ಚ್ 7 ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. 2025-26ನೇ ಆರ್ಥಿಕ ವರ್ಷಕ್ಕೆ ಸಿದ್ದು ಲೆಕ್ಕಾಚಾರ ಇಂದು ಮಂಡನೆಯಾಗಲಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗದ ಜನರು ರಾಜ್ಯ ಬಜೆಟ್ ಅಧಿವೇಶನದತ್ತ ಚಿತ್ತ ಹರಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ ಇದೇ ಮೊದಲ ಬಾರಿಗೆ 4 ಲಕ್ಷ ಕೋಟಿ ಮೀರುವ ನಿರೀಕ್ಷೆಯಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆ, ಹೊಸ ನಿಯಮಗಳ ಜಾರಿ, ಮೂಲಸೌಕರ್ಯ ಅಭಿವೃದ್ಧಿ, ಬೆಂಗಳೂರಿನ ಅಭಿವೃದ್ಧಿ, ಬೆಲೆ ಏರಿಕೆಗೆ ಕಡಿವಾಣ ಕುರಿತು ಸಹಜವಾಗಿಯೇ ಜನರಲ್ಲಿ ಭಾರಿ ನಿರೀಕ್ಷೆಗಳಿವೆ.
ಇಂದು ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9:45ಕ್ಕೆ ಆಯವ್ಯಯವನ್ನು ಅನುಮೋದಿಸಲು ಸಚಿವ ಸಂಪುಟದ ವಿಶೇಷ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಸಭೆ ನಡೆಯಲಿದೆ. ಅಲ್ಲಿಂದ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.