ಭಾರತ, ಮೇ 21 -- ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ಅನುವಾದಿತ ಕೃತಿ ಹಾರ್ಟ್‌ ಲ್ಯಾಂಪ್ಸ್‌ಗೆ ಈ ವರ್ಷದ ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ದೊರಕಿದೆ. ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಸಾಕಷ್ಟು ಜನರು ಲೇಖಕಿ ಬಾನು ಮುಷ್ತಾಕ್‌ ಮತ್ತು ಅನುವಾದಕಿ ದೀಪಾ ಭಸ್ತಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕನ್ನಡ ನಟ ರಾಜ್‌ ಬಿ ಶೆಟ್ಟಿ, ಟಿಎನ್‌ ಸೀತಾರಾಮ್‌, ಚೇತನ್‌ ಅಹಿಂಸಾ, ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ ಸೇರಿದಂತೆ ಸಾಕಷ್ಟು ಜನರು/ ಸಿನಿಮಾ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರು, ನಿರ್ಮಾಪಕರು ಬಾನು ಮುಷ್ತಾಕ್‌ ಮತ್ತು ದೀಪಾ ಭಸ್ತಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಬೂಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿ 2025: ಕನ್ನಡ ಸಾಹಿತ್ಯ ಕೃತಿಯ ಸಾಧನೆಯೊಂದಕ್ಕೆ ಕರ್ನಾಟಕದ ರಾಜಕಾರಣಿಗಳು, ಸಿನಿಮಾ ಕಲಾವಿದರು, ಜನ ಸಾಮಾನ್ಯರು, ಸೆಲೆಬ್ರಿಟಿಗಳು, ಸಾಹಿತಿಗಳು ಸಂಭ್ರಮಿಸುತ್ತಿದ್ದಾರೆ. ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ಅನುವಾದಿತ ಕೃತಿ ಹಾರ್ಟ್‌ ಲ್ಯಾಂಪ್ಸ್‌ಗೆ ಈ ವರ್ಷದ ಅಂತಾರಾಷ್ಟ್ರೀಯ ಬ...