Bangalore, ಫೆಬ್ರವರಿ 13 -- Invest Karnataka 2025: ಬೆಂಗಳೂರಿನಲ್ಲಿ ನಡೆಯುತ್ತಿರುವ ಇನ್ವೆಸ್ಟ್‌ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆಯು ಯಶಸ್ವಿಯಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ತವರು ಜಿಲ್ಲೆಯೂ ಆಗಿರುವ ವಿಜಯಪುರದಲ್ಲಿ ಉದ್ಯಮ ಸ್ಥಾಪನೆಗೆ ಪೂರಕ ವಾತಾವರಣವಿದೆ. ವಿಜಯಪುರದ ಪರಿಸ್ಥಿತಿಗೆ ಅನುಗುಣವಾಗಿ ವಿದ್ಯುತ್‌ ಉತ್ಪಾದನೆ ಹಾಗೂ ಆಹಾರ ಸಂಸ್ಕರಣೆ ಘಟಕಗಳ ಸ್ಥಾಪನೆಗೆ ಒತ್ತು ನೀಡಲಾಗುತ್ತಿದೆ. ʼನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ. ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ವಿಜಯಪುರದಲ್ಲಿ 3000 ಮೆಗಾವಾಟ್‌ ಸಾಮರ್ಥ್ಯದ ಗಾಳಿ ವ...