Bangalore, ಮೇ 5 -- ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿರುವ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಇಂಡಿ ತಾಲ್ಲೂಕಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು ಬೇಕಾಗಿದೆ. ಅವಧಿ ಸಾಲ, ರೈತರಿಗೆ ಮಾಡಬೇಕಾದ ಹಣ ಪಾವತಿ, ಕಬ್ಬಿನ ಕಟಾವು, ಸಾಗಣೆ, ಸಕ್ಕರೆ ಮತ್ತು ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ವೆಚ್ಚಗಳ ಭಾರ ವಿಪರೀತವಾಗಿದೆ. ಈ ಕಾರ್ಖಾನೆಗಳಿಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ಅಥವಾ ಬ್ಯಾಂಕ್ ಖಾತರಿ ಮೂಲಕ ಆರ್ಥಿಕ ಸಹಾಯ ದೊರಕಿಸಿ ಕೊಡಬೇಕೆಂದು ಸಭೆಯಲ್ಲಿ ಗಮನಕ್ಕೆ ತರಲಾಯಿತು. ಈ ಬಗ್ಗೆ ನಿಗಮದ ಜತೆಗೂ ಚರ್ಚಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ...
Click here to read full article from source
To read the full article or to get the complete feed from this publication, please
Contact Us.