ಭಾರತ, ಮೇ 21 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ 6 ವಿಕೆಟ್​ಗಳ ಭರ್ಜರಿ ಗೆಲುವಿನೊಂದಿಗೆ ಅಭಿಯಾನ ಮುಗಿಸಿದೆ. ಈ ಗೆಲುವಿನೊಂದಿಗೆ 10ನೇ ಸ್ಥಾನ ತಪ್ಪಿಸಿಕೊಂಡಿತು. ಕಳೆದ 6 ಪಂದ್ಯಗಳಲ್ಲಿ ಬಹುತೇಕ ಗೆಲ್ಲುವ ಪಂದ್ಯಗಳನ್ನು ಕೈ ಚೆಲ್ಲಿದ್ದ ಆರ್​ಆರ್​ ಕೊನೆಗೂ ಜಯಿಸಿತು. ಆಡಿದ 14 ಪಂದ್ಯಗಳಲ್ಲಿ 4 ಗೆಲುವು, 10 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ.

ಪಂದ್ಯದ ಸೋಲು-ಗೆಲುವಿನ ನಡುವೆ ಎಲ್ಲರ ಗಮನ ಸೆಳೆದಿದ್ದು 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ಸಿಎಸ್​ಕೆ ನಾಯಕ ಎಂಎಸ್ ಧೋನಿ ಪಾದ ಮುಟ್ಟಿ ನಮಸ್ಕರಿಸಿದ್ದು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸಿಎಸ್​ಕೆ ನಿಗದಿತ 20 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆಯುಷ್ ಮಾತ್ರೆ (43), ಡೆವಾಲ್ಡ್ ಬ್ರೆವಿಸ್ (42),...