Bengaluru, ಮೇ 28 -- ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಉತ್ಪಾದನಾ ಘಟಕಗಳನ್ನು ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಅನುಮತಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಎಚ್ಎಎಲ್‌ನ ಸುಧಾರಿತ ಉತ್ಪಾದನಾ ಸೌಲಭ್ಯಗಳನ್ನು ತಮ್ಮ ರಾಜ್ಯಕ್ಕೆ ಸ್ಥಳಾಂತರಿಸುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪಕ್ಕೆ ಡಿಸಿಎಂ ಪ್ರತಿಕ್ರಿಯಿ ನೀಡಿದ್ದಾರೆ.

"ಆಂಧ್ರ ಪ್ರದೇಶ ಸಿಎಂ ಏನು ಬೇಡಿಕೆ ಇಟ್ಟರೂ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಸಂಸತ್ ಸದಸ್ಯರು ಮತ್ತು ಕೇಂದ್ರ ಸಚಿವರು ಇದಕ್ಕೆ ಪ್ರತಿಕ್ರಿಯಿಸಬೇಕೆಂದು ನಾನು ಬಯಸುತ್ತೇನೆ, ಆದರೆ ಸರ್ಕಾರವಾಗಿ ನಾವು ಯಾವುದನ್ನೂ ಸ್ಥಳಾಂತರಿಸಲು ಅನುಮತಿಸುವುದಿಲ್ಲ. ಕೇಂದ್ರ ಸರ್ಕಾರ, ಎಚ್‌ಎಎಲ್‌ ಅನ್ನು ವಿಸ್ತರಿಸಲು ಬಯಸಿದರೆ ನಾವು ಭೂಮಿಯನ್ನು ನೀಡುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.

ಹೊಸ ಯೋಜನೆಗಳನ್ನು ಅವರು ಪಡೆದುಕೊಂಡರೆ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಇಲ್ಲ...