ಭಾರತ, ಮೇ 9 -- ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಆಪರೇಷನ್‌ ಸಿಂದೂರ ಈ ಹಿಂದಿನ ಯುದ್ಧಗಳಿಗಿಂತ ಸಾಕಷ್ಟು ಭಿನ್ನವಾಗಿದೆ. ಭಾರತದಲ್ಲಿ ಪಾಕಿಸ್ತಾನಕ್ಕೆ ಬಹಿಷ್ಕಾರದ ಬಿಸಿ ತಟ್ಟುತ್ತಿದೆ. ಈ ಹಿಂದಿನ ಯುದ್ಧಗಳಿಗಿಂತ ಭಿನ್ನವಾಗಿ ಭಾರತ ಈ ಬಾರಿ ಡ್ರೋನ್‌ಗಳ ಮೂಲಕ ಪಾಕಿಸ್ತಾನದ ಆಯಕಟ್ಟಿನ ಸ್ಥಳಗಳಿಗೆ ನುಗ್ಗಿ ದಾಳಿ ನಡೆಸಿತ್ತು. ಯುದ್ಧ ಆರಂಭವಾಗುವ ಮುನ್ನವೇ ಭಾರತದಲ್ಲಿರುವ ಪಾಕಿಸ್ತಾನಿಯರನ್ನು ತೊರೆಯಲು ಸೂಚಿಸಿತ್ತು. ಇದೀಗ ಒಟಿಟಿಯಲ್ಲಿರುವ ಪಾಕಿಸ್ತಾನದ ಕಂಟೆಂಟ್‌ಗಳನ್ನೂ ತೆಗೆದುಹಾಕುವಂತೆ ಸೂಚಿಸಲಾಗಿದೆ.

ವೆಬ್ ಸರಣಿಗಳು, ಚಲನಚಿತ್ರಗಳು ಹಾಗೂ ಪಾಡ್ ಕಾಸ್ಟ್‌ಗಳು ಸೇರಿದಂತೆ ಒಟಿಟಿಯಲ್ಲಿರುವ ಪಾಕಿಸ್ತಾನ ಮೂಲದ ಎಲ್ಲಾ ಕಂಟೆಂಟ್‌ಗಳ ಪ್ರಸಾರವನ್ನು ಸ್ಥಗಿತಗೊಳಿಸಲು ಒಟಿಟಿ ವೇದಿಕೆಗಳಿಗೆ ನಿನ್ನೆ ತಿಳಿಸಲಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ದಾಳಿ ನಡೆಸುತ್ತಿದೆ. ಈ ಸಮಯದಲ್ಲಿ ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪಾಕಿಸ್...