ಭಾರತ, ಫೆಬ್ರವರಿ 21 -- ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್ ಉಮೇಶ್ ಅವರು ಇಂದು (ಫೆ 21) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಡ್ನಿಗೆ ಸಂಬಂಧಿಸಿದ ಸಮಸ್ಯೆ ಅವರನ್ನು ಕಾಡುತ್ತಿತ್ತು. 'ಅವನೇ ನನ್ನ ಗಂಡ', 'ನನಗೂ ಹೆಂಡತಿ ಬೇಕು', 'ತುಂಬಿದ ಮನೆ',‌ 'ರಾಜ ಕೆಂಪು ರೋಜಾ'ಇನ್ನೂ ಕೆಲವು ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದರು. ಸ್ ಉಮೇಶ್ ಅವರ ಅಂತ್ಯಕ್ರಿಯೆಯನ್ನು ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ತಿಳಿಸಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಉಮೇಶ್‌ ಆರ್ಥಿಕವಾಗಿಯೂ ಸಭಲರಾಗಿರಲಿಲ್ಲ. ಕಷ್ಟದ ದಿನಗಳನ್ನು ಕಳೆದುಕೊಂಡು ಇಹಲೋಕ ತ್ಯಜಿಸಿದ್ದಾರೆ. 2021ರಲ್ಲಿ ತಮಗೆ ಆರ್ಥಿಕ ಸಹಾಯದ ಅವಶ್ಯಕತೆ ಇದೆಯೆಂದು ಮನವಿ ಕೂಡ ಮಾಡಿದ್ದರು. ಕೊರೋನಾ ಕಾಲಾವಧಿಯಲ್ಲಿ ತುಂಬಾ ಸಮಸ್ಯೆಯನ್ನು ಅನುಭವಿಸಿದ್ದರು. ನನಗೆ ಒಂದು ಕಿಡ್ನಿ ಸಮಸ್ಯೆ ಇದೆ ಎಂಬ ವಿಚಾರವನ್ನು ಅವರೇ ಹೇಳಿಕೊಂಡಿದ್ದರು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗ...