ಭಾರತ, ಮೇ 25 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ತಿಳಿಸಿದ್ದಾರೆ. ಮೇ 25ರ ಭಾನುವಾರ ಜಿಲ್ಲೆಯ ಮಳೆ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿ ಮಾತನಾಡಿದರು. ರಾಷ್ಟ್ರೀಯ ವಿಪತ್ತು ದಳದ(ಎನ್‌ಡಿಆರ್‌ಎಫ್) ಒಂದು ತಂಡವು ಆಗಮಿಸಲಿದ್ದು, ಇದನ್ನು ಪುತ್ತೂರಿನಲ್ಲಿ ಇಡಲಾಗುವುದು. ರಾಜ್ಯ ವಿಪತ್ತು ದಳದ (ಎಸ್‌ಡಿಆರ್‌ಎಫ್) ಎರಡು ತಂಡಗಳನ್ನು ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇರಿಸಲಾಗಿದೆ ಎಂದರು.

ಈ ದಳಗಳು ಎಲ್ಲಾ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ. ಎಸ್.ಡಿ.ಆರ್.ಎಫ್. ತಂಡ ಈಗಾಗಲೇ ಆಗಮಿಸಿದೆ ಎಂದು ಅವರು ಹೇಳಿದರು.

ವಿಪತ್ತು ನಿರ್ವಹಣೆಗೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾ...