ಭಾರತ, ಮೇ 12 -- ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಹಳೆ ವಿಡಿಯೊವೊಂದು ಈಗ ವೈರಲ್‌ ಆಗಿದೆ. ಅದರಲ್ಲಿ ಸೋಫಿಯಾ ತಮ್ಮ ಮುತ್ತಜ್ಜಿ ರಾಣಿ ಲಕ್ಷ್ಮೀ ಬಾಯಿ ಜೊತೆ ಹೋರಾಟದಲ್ಲಿ ಭಾಗವಹಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

ಹೋರಾಟಗಾರರ ಕೌಟುಂಬಿಕ ಇತಿಹಾಸ ಹೊಂದಿರುವ ಸೋಫಿಯಾ ಆಪರೇಷನ್‌ ಸಿಂದೂರ ಕಾರ್ಯಾಚರಣೆಯ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡುವ ಮೂಲಕ ಪ್ರಪಂಚದ ಗಮನ ಸೆಳೆದವರು.

ಆಪರೇಷನ್‌ ಸಿಂದೂರದ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಲ್‌ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಜೊತೆ ಭಾಗವಹಿಸಿದ್ದರು.

ಕರ್ನಲ್ ಖುರೇಷಿ ಆಪರೇಷನ್‌ ಸಿಂದೂರದ ಕಾರ್ಯತಂತ್ರದ ವಿವರಗಳನ್ನು ಮಾಧ್ಯಮಗಳ ಮುಂದೆ ತೆರೆದಿಟ್ಟಿದ್ದು ಮಾತ್ರ ಶಕ್ತಿ, ಏಕತೆ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಸಂಕೇತಿಸಿದರು.

ಆಪರೇಷನ್ ಸಿಂದೂರ ಕಾರ್ಯಚರಣೆಯ ಬಗ್ಗೆ ವಿವರಣೆ ನೀಡಿದ ನಂತರದ ದಿನಗಳಿಂದ ಸೋಫಿಯಾ ಖುರೇಷಿ ಬಗ್ಗೆ ತಿಳಿದುಕೊಳ್ಳಲು ಜನ ಉತ್ಸುಕರಾಗಿದ್ದಾರೆ. ಸೋಫಿಯಾ...