Bengaluru, ಮೇ 8 -- ಬೆಂಗಳೂರು: ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಕೈಗೊಂಡ ಉಗ್ರ ನಿಗ್ರಹ ಕಾರ್ಯಾಚರಣೆ ಆಪರೇಷನ್ ಸಿಂದೂರ್ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ಆಪರೇಷನ್ ಸಿಂಧೂರ್ ವಿವರಗಳನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರಸ್ತುತಪಡಿಸಿದ ಕರ್ನಲ್ ಸೋಫಿಯಾ ಖುರೇಷಿ ಅವರು ಕರ್ನಾಟಕ ಬೆಳಗಾವಿಯ ಸೊಸೆ ಎನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ.

ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಅವರು ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಕೊಣ್ಣೂರು ಪಟ್ಟಣದವರು. ಅವರು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿರುವ ಇವರಿಬ್ಬರೂ 2015 ರಲ್ಲಿ ವಿವಾಹವಾದರು. ಸೋಫಿಯಾ ಖುರೇಷಿ ಅವರು ಗುಜರಾತ್‌ನ ಬರೋಡಾದವರಾಗಿದ್ದು, ಗೋಕಾಕ್‌ನ ತಾಜುದ್ದೀನ್ ಅವರನ್ನು ವಿವಾಹವಾಗಿರುವುದರಿಂದ ಅವರು ಬೆಳಗಾವಿಯ, ನಮ್ಮ ರಾಜ್ಯದ ಹೆಮ್ಮೆಯ ಸೊಸೆಯಾಗಿದ್ದಾರೆ...