Bangalore, ಮೇ 29 -- ಬೆಂಗಳೂರು: ಕರ್ನಾಟಕದಲ್ಲಿ ಇಂದು ಶಾಲಾ ಕಾಲೇಜುಗಳು ಪುನಾರಂಭವಾಗುತ್ತಿದೆ. ಮಕ್ಕಳಿಗೆ ಮೊದಲ ದಿನ ಶಾಲಾ ಕಾಲೇಜುಗಳಿಗೆ ಹೋಗುವ ಖುಷಿ. 2025-26ನೇ ಸಾಲಿನಲ್ಲಿ ಪಿಎಂ ಪೋಷಣ್‌ (ಮಧ್ಯಾಹ್ನದ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರ ಮತ್ತು ಅನುದಾನಿತ 1-10ನೇ ತರಗತಿಯ ವಿದ್ಯಾರ್ಥಿಗಳಿಗೆ ಪೂರೈಸಲಾಗುತ್ತಿದೆ. ಇದರೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೂ ಸೂಚನೆಗಳನ್ನು ನೀಡಲಾಗಿದೆ. ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳ ನೇಮಕಕ್ಕೆ ಈಗಾಗಲೇ ಆದೇಶ ನೀಡಲಾಗಿದೆ. ಕಳೆದ ಹಲವು ದಿನಗಳಿಂದ ರಜೆಯ ಮಜಾದಲ್ಲಿದ್ದ ವಿದ್ಯಾರ್ಥಿಗಳು ಇಂದು ಮತ್ತೆ ಶಾಲೆಗೆ ಹೋಗುತ್ತಿದ್ದಾರೆ. ಕೆಲವು ಮಕ್ಕಳಿಗೆ ಮೊದಲ ದಿನ ಹೊಸ ಸ್ಕೂಲ್‌ಗೆ ಹೋಗುವ ಆತಂಕ, ತವಕ, ಇನ್ನು ಕೆಲವು ವಿದ್ಯಾರ್ಥಿಗಳು ಹಳೆಯ ಗೆಳತಿ ಗೆಳೆಯರ ಜತೆ ಮತ್ತೆ ಶಾಲಾ ಕಾಲೇಜುಗಳಲ್ಲಿ ಕಳೆಯುವ ಖುಷಿಯಲ್ಲಿ ಇಂದು ಇದ್ದಾರೆ.

ಗ್ರೇಟ...