ಭಾರತ, ಮಾರ್ಚ್ 24 -- Karnataka Honeytrap Case: ಕರ್ನಾಟಕದ ಶಾಸಕರು, ಸರ್ಕಾರಿ ನೌಕರರು ಹಾಗೂ ನ್ಯಾಯಾಧೀಶರ ಹನಿಟ್ರ್ಯಾಪ್ ಆರೋಪದ ಬಗ್ಗೆ ಸಿಬಿಐ ಅಥವಾ ಎಸ್ಐಟಿಯಿಂದ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣವನ್ನು ಶೀಘ್ರವಾಗಿ ಪಟ್ಟಿ ಮಾಡಲು ಅರ್ಜಿದಾರರ ವಕೀಲರು ಈ ವಿಷಯವನ್ನು ಉಲ್ಲೇಖಿಸಿದ್ದಾರೆ. ಇಂದು (ಮಾರ್ಚ್ 24) ಅಥವಾ ನಾಳೆ (ಮಾರ್ಚ್ 25) ವಿಚಾರಣೆಗೆ ಪಟ್ಟಿ ಮಾಡಲು ಒಪ್ಪಿಕೊಂಡಿತು.
ಅರ್ಜಿಯಲ್ಲಿ, ಕರ್ನಾಟಕ ರಾಜ್ಯದ ನಿಯಂತ್ರಣ ಅಥವಾ ಪ್ರಭಾವಕ್ಕೆ ಒಳಪಡದ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡ (ಎಸ್ಐಟಿ) ಯಿಂದ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಲಾಗಿದೆ. ವಕೀಲ ಬರುನ್ ಸಿನ್ಹಾ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ ಅಥವಾ ನಿವೃತ್ತ ಸು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.