Bangalore, ಮೇ 18 -- ಬೆಂಗಳೂರು: ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆಗಳ ಜತೆಯಲ್ಲಿ ಸಣ್ಣ ಕೈಗಾರಿಕೆಗಳ ಪ್ರಗತಿಗೂ ಕರ್ನಾಟಕದಲ್ಲಿ ಒತ್ತು ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಇಲಾಖೆಯನ್ನು ರಚನೆ ಮಾಡುವ ಭರವಸೆ ದೊರೆತಿದೆ.ಸಹಸ್ರಾರು ಸಂಖ್ಯೆಯಲ್ಲಿ ಎಂಎಸ್ಎಂಇ ಅಡಿಯಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ಕೆಲಸ ಮಾಡುತ್ತಿದ್ದರೂ ಕರ್ನಾಟಕದಲ್ಲಿ ಪ್ರತ್ಯೇಕ ಇಲಾಖೆ ರಚಿಸುವ ಬೇಡಿಕೆ ಈಡೇರಿರಲಿಲ್ಲ. ಪ್ರತ್ಯೇಕ ಇಲಾಖೆ, ಕಾರ್ಯದರ್ಶಿಯನ್ನು ನೇಮಿಸುವ ಮೂಲಕ ಈ ವಲಯಕ್ಕೆ ಇನ್ನಷ್ಟು ಶಕ್ತಿ ನೀಡಬೇಕು. ಸರ್ಕಾರದ ಗಮನ ಸೆಳೆಯಲು ಸಹಾಯವಾಗಲಿದೆ ಎನ್ನುವ ಬೇಡಿಕೆ ಇತ್ತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕರ್ನಾಟಕದ ಮುಖ್ಯಮಂತ್ರಿಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಅಭಯ ನೀಡಿದರು.

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 'ಅಮೃತ ಮಹೋತ್ಸವ' ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಸ...