Bangalore, ಮೇ 16 -- ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗ್ರಾಮಗಳು ಮಿತಿ ಮೀರಿ ಬೆಳೆದಿವೆ. ಅವುಗಳ ವ್ಯಾಪ್ತಿಯೂ ಹಿಗ್ಗಿದ್ದು ಗ್ರಾಮ ಠಾಣಾ ಗಡಿಯನ್ನು ನಿಗದಿಪಡಿಸದೇ ವರ್ಷಗಳೇ ಕಳೆದಿವೆ.ಅದರಲ್ಲೂ ಈಗ ರಿಯಲ್ ಎಸ್ಟೇಟ್ ಉದ್ಯಮವು ಗ್ರಾಮಾಂತರ ಪ್ರದೇಶಕ್ಕೂ ಕಾಲಿಟ್ಟಿದ್ದು, ಹಳ್ಳಿಗಳ ಗಡಿ ಗುರುತಿಸುವ ಕಾರ್ಯವೂ ಆಗಬೇಕಾಗಿದೆ. ಈ ಕಾರಣದಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ನಡೆಯಿತು. ಈ ವೇಳ...
Click here to read full article from source
To read the full article or to get the complete feed from this publication, please
Contact Us.