ಭಾರತ, ಮೇ 21 -- ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ಬುಧವಾರ ಮುಕ್ತಾಯವಾಗಿದ್ದು, ಸಿಐಡಿ ಡಿಜಿಪಿ ಡಾ ಎಂಎ ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸಂಜೆ ಡಾ ಎಂಎ ಸಲೀಂ ಅವರು ಹಂಗಾಮಿ ಡಿಜಿ-ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದರು.ಅಲೋಕ್ ಮೋಹನ್ ಅವರು ಇಂದು ಸೇವೆಯಿಂದ ನಿವೃತ್ತರಾಗಿದ್ದು, ಬೆಳಿಗ್ಗೆ ಅವರಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿತ್ತು. ಡಿಜಿ-ಐಜಿಪಿ ಅವರ ನಿರ್ಗಮನ ನಿರ್ಗಮನ ಸೂಚನೆಯಾಗಿ ಪ್ರಶಂಸನಾ ಸೇವಾ ಪರೇಡ್ ಸಹ ಆಯೋಜನೆಯಾಗಿತ್ತು.
ಬೆಂಗಳೂರು ನಗರದ ನೃಪತುಂಗ ರಸ್ತೆಯಲ್ಲಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸೇವೆಯಿಂದ ನಿರ್ಗಮಿತ ಡಿಜಿಪಿ ಅವರು ನೂತನ ಡಿಜಿಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು.
ಡಾ ಎಂಎ ಸಲೀಂ ಅವರ ನಿವೃತ್ತಿ ಅವಧಿ 2 ವರ್ಷಗಳಿಗಿಂತಲೂ ಕಡಿಮೆ ಇದೆ. ಸೇವಾ ಹಿರಿತನ ಆಧಾರದ ಮೇರೆಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶ...
Click here to read full article from source
To read the full article or to get the complete feed from this publication, please
Contact Us.