Bengaluru,Mysuru, ಮೇ 23 -- ಬೆಂಗಳೂರು: ಕ್ಯಾನ್ಸರ್‌ ರೋಗಿಗಳ ಅನುಕೂಲಕ್ಕಾಗಿ ಕರ್ನಾಟಕದ 16 ಜಿಲ್ಲಾ ಆಸ್ಪತ್ರೆಗಳಲ್ಲಿ 'ಡೇ ಕೇರ್ ಕಿಮೋಥೆರಪಿ' ಕೇಂದ್ರಗಳು ಇಂದು ಕಾರ್ಯಾರಂಭ ಮಾಡುತ್ತಿವೆ. ಕ್ಯಾನ್ಸರ್ ರೋಗಿಗಳು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ (ಎಸ್‌ಎಎಸ್‌ಟಿ) ನೋಂದಾಯಿತ ತೃತೀಯ ಹಂತದ ಕ್ಯಾನ್ಸರ್‌ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರಿದ ಕಿಮೋಥೆರಪಿ ಚಿಕಿತ್ಸೆಯನ್ನು 'ಹಬ್‌-ಆ್ಯಂಡ್‌-ಸ್ಪೋಕ್' ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸ್ಥಾಪಿಸುವ 'ಡೇ ಕೇರ್‌ ಕಿಮೋಥೆರಪಿ ಕೇಂದ್ರ'ಗಳಲ್ಲಿ ಪಡೆಯಬಹುದು.

ಡೇ ಕೇರ್‌ ಕೀಮೋಥೆರಪಿ ಕೇಂದ್ರ ಸ್ಥಾಪನೆ ಮೂಲಕ ಕ್ಯಾನ್ಸರ್‌ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಆರೈಕೆ, ಆಸ್ಪತ್ರೆ ವೆಚ್ಚ ಕಡಿತ ಮಾಡುವ ಜೊತೆಗೆ, ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸುವವರ ಸಂಖ್ಯೆ ಕಡಿಮೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರಗಳಲ್...