Bengaluru, ಏಪ್ರಿಲ್ 12 -- Caste Census Report: ಕರ್ನಾಟಕ ಜಾತಿ ಗಣತಿ ವರದಿ ಕುರಿತಾದ ಅಸಮಾಧಾನ, ಆಕ್ಷೇಪಣೆಗಳು ತೀವ್ರಗೊಂಡಿರುವಾಗಲೇ ನಿನ್ನೆ (ಏಪ್ರಿಲ್ 11) ಸಚಿವ ಸಂಪುಟ ಸಭೆಯಲ್ಲಿ ಸಚಿವರ ಕೈ ಸೇರಿದೆ. ಈ ಸಚಿವ ಸಂಪುಟ ಸಭೆಗೆ 6 ಸಚಿವರು ಗೈರಾಗಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ, ಜಾತಿ ಗಣತಿ ವರದಿ ಕುರಿತಾಗಿ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಈ ಜಾತಿ ಗಣತಿ ವರದಿಯನ್ನು ಸರ್ಕಾರ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಎಂದು ಹೇಳಿದ್ದು, ಏಪ್ರಿಲ್ 17ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅದರ ಭವಿಷ್ಯ ನಿರ್ಧರಿಸುವ ಸಾಧ್ಯತೆ ಇದೆ.
ಸಿದ್ದರಾಮಯ್ಯನವರು ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಸಮೀಕ್ಷೆಯ ಹೊಣೆಯನ್ನು ವಹಿಸಿದ್ದರು. ನಂತರ ಇದನ್ನು ಜಯಪ್ರಕಾಶ ಹೆಗ್ಡೆ ನೇತೃತ್ವದ ಆಯೋಗ ಮುಂದುವರಿಸಿದ್ದು, ಸಮೀಕ್ಷೆಯ ದತ್ತಾಂಶಗಳ ಅಧ್ಯಯನ ವರದಿಯನ್ನು 2024ರ ಫೆಬ್ರವರಿಯಲ್ಲಿ ಈಗಿನ ...
Click here to read full article from source
To read the full article or to get the complete feed from this publication, please
Contact Us.