Bangalore, ಮೇ 27 -- ಬೆಂಗಳೂರು: ನಿರಂತರ ಎರಡು ವರ್ಷದಿಂದ ಬಿಜೆಪಿಯಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದರು ಎನ್ನುವ ಆರೋಪದ ಮೇಲೆ ಇಬ್ಬರು ಶಾಸಕರಾದ ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್‌, ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಶಾಸಕ ಅರೇಬೈಲು ಶಿವರಾಂ ಹೆಬ್ಬಾರ್‌ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷದ ಹಿಂದೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರೂ ಆಗಿದ್ದ ಈ ಇಬ್ಬರು ಆನಂತರ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಚುನಾಯಿತರಾಗಿದ್ದರು. ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಆದಂತಹ ಬೆಳವಣಿಗೆಗಳ ಬಳಿಕ ಎಸ್‌ಟಿ ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಭಾರ್‌ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಈ ಕಾರಣದಿಂದ ಅವರನ್ನು ಈಗ ಬಿಜೆಪಿ ಅಮಾನತು ಮಾಡಿ ಆದೇಸ ಹೊರಡಿಸಿದೆ.

ಎಸ್‌ಟಿ ಸೋಮಶೇಖರ್‌ ಅವರು ಎರಡು ದಿನದ ಹಿಂದೆ ನಡೆದ ಬೆಂ...