ಭಾರತ, ಮೇ 24 -- ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏಪ್ರಿಲ್ 15,16 ಹಾಗೂ 17 ರಂದು ನಡೆಸಿರುವ ಕರ್ನಾಟಕ ಯುಜಿ ಸಿಟಿಇ ಪರೀಕ್ಷೆಯ ಫಲಿತಾಂಶ ಇಂದು (ಮೇ 24) ಪ್ರಕಟವಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಈ ಪರೀಕ್ಷೆಯನ್ನು ನಡೆಸುತ್ತದೆ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಫಲಿತಾಂಶ ಪ್ರಕಟಿಸಿದ್ದಾರೆ.

ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿಯ ಚೈತನ್ಯ ಶಾಲೆಯ ಭುವೇಶ್ ಜಯಂತಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಶೇ 98.67 ಅಂಕ ಗಳಿಸಿದ್ದಾರೆ.

ಈ ಬಾರಿ ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಎಂ.ಸಿ.ಸುಧಾಕರ್​ ಯುಜಿಸಿಇಟಿ-2025 ಫಲಿತಾಂಶ ಪ್ರಕಟಿಸಿದ್ದು, ಸಿಇಟಿಯಲ್ಲಿ ಭವೇಶ್​ ಜಯಂತಿಗೆ ಮೊದಲ ಸ್ಥಾನ(99.06%) ಪಡೆದುಕೊಂಡಿದ್ದಾರೆ.

ಏಪ್ರಿಲ್...