ಭಾರತ, ಫೆಬ್ರವರಿ 21 -- ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯಗಳ ಪೂರ್ಣ ಅಧಿಕಾರ ನೀಡುವಂತಹ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ-2025 ಮಂಡನೆಗೆ ಸಿದ್ದವಾಗಿದ್ದು, ಈ ಸಲದ ಬಜೆಟ್ ಅಧಿವೇಶನದಲ್ಲೇ ಮಂಡನೆಯಾಗುವ ಸಾಧ್ಯತೆ ಇದೆ. ಈ ಮಸೂದೆ ಮಂಡನೆಯಾಗಿ ಅಂಗೀಕಾರವಾದರೆ, ಆ ನಂತರದಲ್ಲಿ ರಾಜ್ಯಪಾಲರ ಪಾತ್ರ ವಿಶ್ವ ವಿದ್ಯಾಲಯಗಳ ಘಟಿಕೋತ್ಸವಕ್ಕೆ ಮಾತ್ರ ಸೀಮಿತವಾಗುವ ಸಾಧ್ಯತೆ ಇದೆ. ಮಾರ್ಚ್ 3 ರಿಂದ ಕರ್ನಾಟಕ ಬಜೆಟ್ ಅಧಿವೇಶನ ಶುರುವಾಗಲಿದ್ದು, ಮಾರ್ಚ್ 21ರ ತನಕ ನಡೆಯಲಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ-2000 ದ ಪ್ರಕಾರ, ಕರ್ನಾಟಕ ಸರ್ಕಾರವೇ ಕುಲಪತಿ ನೇಮಕಾತಿಗೆ ಮೂವರು ಸದಸ್ಯರನ್ನು ಒಳಗೊಂಡ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಸಮಿತಿಯ ಸದಸ್ಯರ ಪೈಕಿ ಒಬ್ಬರನ್ನು ಶಿಫಾರಸು ಮಾಡುವ ಅಧಿಕಾರ ರಾಜ್ಯಪಾಲರದ್ದಾಗಿತ್ತು. ರಾಜ್ಯಪಾಲರು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ಕಾರಣ ಅವರಿಗೆ ಈ ಅಧಿಕಾರ ನೀಡಲಾಗಿತ್ತು. ಆಯಾ ವಿಶ್ವವಿದ್ಯಾಲಯದ ಸಿಂಡಿಕೇಟ್, ವಿಶ್ವ ವಿದ್ಯಾಲಯ ಅನು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.