ಭಾರತ, ಏಪ್ರಿಲ್ 11 -- ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಕಾಂಗ್ರೆಸ್ ಪಕ್ಷ ಪ್ರಚಾರಕ್ಕೆ ಬಳಸಿಕೊಂಡು ಅಭಿಯಾನ ನಡೆಸಿತ್ತು. ಕಳೆದ ಚುನಾವಣೆಯಲ್ಲಿ ಇದೇ ವಿಚಾರ ಮುಂದಿಟ್ಟು ವಿಜಯಿಯಾಗಿ ಆಡಳಿತ ಚುಕ್ಕಾಣಿ ಹಿಡಿದುಕೊಂಡಿದೆ. ಈಗ ಮತ್ತದೇ ಆರೋಪ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದಿಂದ ವ್ಯಕ್ತವಾಗಿದೆ. ಈ ಬಾರಿ ಲೋಕೋಪಯೋಗಿ, ನಾಲ್ಕು ನೀರಾವರಿ ನಿಗಮಗಳು ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ "ಸ್ಪೆಷಲ್ ಎಲ್‌ಒಸಿ" ಹಾಗೂ "ಕಾಣದ ಕೈಗಳು" ಸಿಕ್ಕಾಪಟ್ಟೆ ಕಾಡುತ್ತಿವೆ ಎಂದು ಸಂಘ ಆರೋಪಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಣ್ಣ ನೀರಾವರಿ ಸಚಿವ ಎನ್‌ ಎಸ್ ಬೋಸರಾಜು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿಯವರಿಗೆ ಪತ್ರವನ್ನೂ ಬರೆದಿದ್ದು, 2024-25ನೇ ಸಾಲಿನ ಕಾಮಗಾರಿಯ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್‌...