Bangalore, ಮೇ 5 -- ಬೆಂಗಳೂರು: ಕರ್ನಾಟಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ತುಟ್ಟಿಭತ್ಯೆ(Dearness Allowance)ಯನ್ನು ಹೆಚ್ಚಿಸಿ ಸೋಮವಾರ ಆದೇಶ ಹೊರಡಿಸಿದೆ.ನೌಕರರಿಗೆ ತುಟ್ಟಿಭತ್ಯೆ ಶೇ.1.50 ರಷ್ಟು ಹೆಚ್ಚಳ ಮಾಡಲಾಗಿದೆ.ನೌಕರರು ತಮ್ಮ ಮೂಲ ವೇತನದ ಶೇ 10.75ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಹೊಸ ಆದೇಶದಿಂದಾಗಿ ಒಟ್ಟು ತುಟ್ಟಿಭತ್ಯೆ ಪ್ರಮಾಣ ಶೇ 12.25ಕ್ಕೆ ಏರಿಕೆಯಾಗಲಿದೆ. ಈ ಕುರಿತು ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಕಟಣೆ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಮಸ್ತ ಕರ್ನಾಟಕ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.