ಭಾರತ, ಮಾರ್ಚ್ 29 -- Karnataka Weather: ಕರ್ನಾಟಕದಲ್ಲಿ ಇಂದು (ಮಾರ್ಚ್ 29) ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಉಳಿದಂತೆ ಒಣಹವೆ ಮುಂದುವರಿಯಲಿದ್ದು, ಕಲಬುರಗಿ, ಬೀದರ್, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಉಷ್ಣದ ಅಲೆಗಳು ತೀವ್ರವಾಗಿದ್ದು, ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ದಾಟಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿನ್ನೆ (ಮಾರ್ಚ್‌ 28) ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ದಾಟಿದೆ. ರಾಯಚೂರು ಮತ್ತು ಬೀದರ್‌ಗಳಲ್ಲಿ 42 ಡಿಗ್ರಿ ಸೆಲ್ಶಿಯಸ್ ದಾಟಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ನಿರೀಕ್ಷಿಸಬಹುದು. ಬೆಂಗಳೂರು ನಗರದಲ...