Bangalore, ಮಾರ್ಚ್ 8 -- Karnataka Weather: ಕರ್ನಾಟಕದಲ್ಲಿ ಬಿಸಿಲಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಗುರುವಾರ ಹಾಗೂ ಶುಕ್ರವಾರದಂದು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗರಿಷ್ಠ ಉಷ್ಣಾಂಶದ ಪ್ರಮಾಣ ಹೆಚ್ಚಾಗಿದೆ. ಅದೂ ಕೆಲವು ಕಡೆಗಳಲ್ಲಿ ಉಷ್ಣಾಂಶದ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್‌ ಅನ್ನು ದಾಟಿದೆ. ಕರಾವಳಿಯ ಕಾರವಾರ, ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಹಾಗು ವಿಜಯನಗರ ಜಿಲ್ಲೆಯಲ್ಲಿ ಉಷ್ಣಾಂಶದ ಪ್ರಮಾಣ ಹೆಚ್ಚಿ ಜನ ಬಿಸಿಲಿನ ಕಾವಿನಿಂದ ಬಳಲುವಂತಾಗಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣದಲ್ಲೂ ಕುಸಿತ ಕಂಡಿದೆ. ಇನ್ನು ಬಿಸಿಲಿನ ನಡುವೆ ಮುಂದಿನ ವಾರ ಕರ್ನಾಟಕದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆಯನ್ನು ನೀಡಿದೆ.

Published by HT Digital Content Services with permission from HT Kannada....