ಭಾರತ, ಮೇ 22 -- ಇಂದಿನ ಹವಾಮಾನ: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಸುರಿದ ಕಾರಣ ಬಹುತೇಕ ಭೂ ಪ್ರದೇಶಗಳು ತಂಪಾಗಿವೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಪ್ರದೇಶಗಳಲ್ಲಿ ಮಳೆ ಹಾನಿಯೂ ಉಂಟಾಗಿದೆ. ಇಂದು (ಮೇ 22) ಬೆಂಗಳೂರು ಸೇರಿ ವಿವಿಧೆಡೆ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಬಹುತೇಕರಲ್ಲಿ ನಿರಾಳ ಭಾವ ಮೂಡಲಿದೆ. ಇನ್ನೊಂದೆಡೆ, ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂಗಾರು ಮಳೆಯಾಗಿ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಇಂದು (ಮೇ 22) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು ಹಾಗೂ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲೂ ಇದೇ ರೀತಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಮಳೆ ಹವಾಮಾ...