ಭಾರತ, ಮಾರ್ಚ್ 11 -- Karnataka Weather March 11: ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್ ಮೇಲೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಸುಡುಬಿಸಿಲು ಜನರ ನಿತ್ಯಬದುಕನ್ನು ಕಾಡಿದೆ. ಈ ನಡುವೆ, ಮಾರ್ಚ್‌ 12 ರಿಂದ 14ರ ತನಕ ಮಳೆ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ, ನಿನ್ನೆ ಬಿಡುಗಡೆ ಮಾಡಿದ್ದ ಹವಾಮಾನ ಮುನ್ಸೂಚನೆ ವರದಿಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಸದ್ಯ ಮಳೆ ಸಾಧ್ಯತೆ ಕಡಿಮೆ ಎಂದು ಹೇಳಿದೆ. ಆದಗ್ಯೂ, ಇಂದು ಮತ್ತು ನಾಳೆ (ಮಾರ್ಚ್ 12) ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ.

ಕರ್ನಾಟಕದಲ್ಲಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲ್ಲಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಸುಡುಬಿಸಿಲು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕದ ಉತ್ತರ ಒಳನಾಡಿನ ವಿವಿದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗರಿಷ್ಠ ತಾ...