ಭಾರತ, ಏಪ್ರಿಲ್ 2 -- ಕರ್ನಾಟಕದಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಭಾರತ ಹವಾಮಾನ ಇಲಾಖೆಯ ವರದಿ ಪ್ರಕಾರ ಕರಾವಳಿ ಭಾಗದಲ್ಲಿಂದು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆಯಾಗುತ್ತದೆ ಎಂದು ವರದಿಯಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಈ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ಏಪ್ರಿಲ್ 2 ರಿಂದ ಮಳೆಯಾಗುವ ಸಾಧ್ಯತೆ ಇರುವುದರಿಂದ ಸುಡುವ ಬಿಸಿಲಿನಿಂದ ಮುಕ್ತಿ ಪಡೆಯಬಹುದು. ಮಳೆಯಿಂದಾಗಿ ಏರುತ್ತಿರುವ ತಾಪಮಾನ ಕಡಿಮೆಯಾಗುತ್ತದೆ. 'ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 34 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ' ಎಂದು ಐಎಂಡಿ ಸೂಚನೆ ನೀಡಿದೆ. ಇಂದು ಬೆಂಗಳೂರಿನ...