ಭಾರತ, ಮೇ 8 -- ರಿಷಬ್‌ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್‌ 1 ಸಿನಿಮಾದ ಜೂನಿಯರ್‌ ಕಲಾವಿದನೊಬ್ಬ ಇತ್ತೀಚೆಗೆ ನದಿ ನೀರಿನಲ್ಲಿ ಮುಳುಗಿರುವುದಕ್ಕೆ ಸಂಬಂಧಪಟ್ಟಂತೆ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆಯೊಂದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ದಯವಿಟ್ಟು ಈ ಘಟನೆಯನ್ನು ಕಾಂತಾರ ಚಿತ್ರ ಅಥವಾ ಸಿಬ್ಬಂದಿಯೊಂದಿಗೆ ಯಾವುದೇ ರೀತಿಯ ಸಂಬಂಧ ಕಲ್ಪಿಸಬೇಡಿ ಎಂದು ಹೊಂಬಾಳೆ ಫಿಲ್ಮ್ಸ್‌ ಮನವಿ ಮಾಡಿದೆ.

"ಎಂಎಫ್‌ ಕಪಿಲ್‌ ಅವರ ನಿಧನಕ್ಕೆ ನಮ್ಮ ಅಗಾಧವಾದ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ" ಎಂದು ಹೊಂಬಾಳೆ ಫಿಲ್ಮ್ಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

"ಈ ಹಿನ್ನೆಲೆಯಲ್ಲಿ, ಈ ಘಟನೆ ಕಾಂತಾರ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಲು ನಾವು ಬಯಸುತ್ತೇವೆ. ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ. ಈ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ ...