Bengaluru, ಮೇ 19 -- ಮೈಸೂರು : ಕಾಂಗ್ರೆಸ್‌ನವರು ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಇದು ಕೊಲೆಗಡುಕರ ಸರ್ಕಾರ ಎಂದು ಘಂಟಾಘೋಷವಾಗಿ ಹೇಳಬಹುದಾಗಿದೆ. ಅಮಾಯಕ ಬಡವರಿಗೆ ಆಸ್ಪತ್ರೆಗಳಲ್ಲಿ ಔಷಧಿ ಮಾತ್ರೆ ಸಿಗುತ್ತಿಲ್ಲ. ಕಾರ್ಮಿಕ‌ ಸಚಿವರು ಕಾರ್ಮಿಕರ ಹಣ ತೆಗೆದುಕೊಂಡು ಕಾರ್ಮಿಕರ ಯೋಜನೆಗಳ ಬಗ್ಗೆ ಗೊತ್ತಿಲ್ಲ ಎನ್ನುತ್ತಾರೆ ಎಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ.

ಸಂವಿಧಾನದ ಹೆಸರಲ್ಲಿ ಸಮಾನತೆಯ ಶಿಕ್ಷಣ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಬೇರೂರಿದೆ. ಎಕ್ಸೈಸ್ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ‌. ಗುತ್ತಿಗೆದಾರರ ಬಳಿ 60% ಕಮೀಷನ್ ಕೇಳ್ತಿದ್ದಾರೆಂದು ಸ್ವತಃ ಗುತ್ತಿಗೆದಾರರು ಆರೋಪಿಸಿದ್ದಾರೆ. ಕಂಡಿದ್ದನ್ನೆಲ್ಲ ನುಂಗುವಂತಹ ಇಂತಹ ಸರ್ಕಾರ ಹಿಂದೆಂದೂ ಇರಲಿಲ್ಲ. ಗ್ಯಾರಂಟಿ ಸರ್ಕಾರ ಎಂದು ಹೇಳಿಕೊಂಡು ಯಾವುದನ್ನು ಗ್ಯಾರಂಟಿಯಾಗಿ ಕೊಡುತ್ತಿಲ್ಲ‌ ಎಂದು ಸಿ ಎನ್ ಅಶ್ವಥ್ ನಾರಾಯಣ್ ಹೇ...