New Delhi, ಮೇ 11 -- ಆಪರೇಷನ್ ಸಿಂದೂರ್‌ ಮೂಲಕ ಭಾರತವು ಪಾಕಿಸ್ತಾನಕ್ಕೆ ಸರಿಯಾದ ಹೊಡೆತ ನೀಡಿದೆ. ಪಾಕಿಸ್ತಾನದ ಆಶ್ರಯದಲ್ಲಿದ್ದ ಹತ್ತಾರು ಭಯೋತ್ಪಾದಕ ನೆಲೆಗಳನ್ನು ನಾಶ ಮಾಡಿದ ಭಾರತೀಯ ಸೇನೆಯ ದಾಳಿಯಿಂದಾಗಿ ಅಲ್ಲಿದ್ದ 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟರು. ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಭಾರತವು ಮೂರು ರಣತಂತ್ರಗಳನ್ನು ಒಳಗೊಂಡಿರುವಂತೆ ನೋಡಿಕೊಂಡಿದೆ. ವಿಶೇಷವಾಗಿ ರಾಜತಾಂತ್ರಿಕ, ಸೇನಾ ಕಾರ್ಯಾಚರಣೆ ಮತ್ತು ಮನೋವೈಜ್ಞಾನಿಕ ತಂತ್ರಗಳು ಈ ಕಾರ್ಯಾಚರಣೆಯಲ್ಲಿ ಮಿಳಿತವಾಗಿರುವುದು ವಿಶೇಷ. ಪಹಲ್ಗಾಮ್ ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ಆಲ್‌ ಔಟ್ ಸಮರ ಸಾರುವುದಾಗಿ ಎಚ್ಚರಿಸಿದ್ದರು.

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಯೋತ್ಪಾದನೆ ವಿರುದ್ಧ ಹೋರಾಟ ಬಲಗೊಳಿಸಿರುವ ಭಾರತ, ಗಡಿಯಾಚೆಗಿನ ಭಯೋತ್ಪಾದನೆ ತಡೆಯಲು ಮುಂದಾಗಿದೆ. ಭಯೋತ್ಪಾದಕರಿಗೆ ಪಾಕಿಸ್ತಾನ ನೀಡುತ್ತಿದ್ದ ಬೆಂಬಲ ತಡೆಯುವುದಕ್ಕೆ ಅಗತ್ಯ ಕ್ರಮಗಳನ್ನು ಭಾರತ ತೆಗೆದುಕೊಂಡಿತು. ಆಪರೇಷನ್ ಸಿಂದೂರ ಕಾರ್ಯಾಚರಣೆ ಶುರುಮಾಡಿ...