ಭಾರತ, ಏಪ್ರಿಲ್ 27 -- ಧಾರಾವಾಹಿ, ರಿಯಾಲಿಟಿ ಷೋ ಸೇರಿದಂತೆ ಕಿರುತೆರೆಯಲ್ಲಿ ಛಾಪು ಮೂಡಿಸಿರುವ ಅನೇಕ ಕಲಾವಿದರು ಸಿನಿಮಾಗಳಲ್ಲೂ ನಟಸಿರುವ ಮೂಲಕ ತಮ್ಮ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಇವರಲ್ಲಿ ಹಲವರಿಗೆ ಬೆಳ್ಳಿತೆರೆ ಕೈ ಹಿಡಿದಿಲ್ಲ. ಕಿರುತೆರೆಯಲ್ಲಿ ಸಾಕಷ್ಟು ಹೆಸರು ಗಳಿಸಿ, ಸಿನಿಮಾಗಳಲ್ಲೂ ನಟಿಸಿರುವ ಕೆಲವು ಟಿವಿ ಕಲಾವಿದರ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯ್ ಸೂರ್ಯ: ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಸಾಕಷ್ಟು ಹೆಸರು ಮಾಡಿದ್ದ ನಟ ವಿಜಯ್ ಸೂರ್ಯ ನಂತರ ಸಿನಿರಂಗದತ್ತ ವಾಲುತ್ತಾರೆ. ಕ್ರೇಜಿ ಲೋಕ, ಇಷ್ಟಕಾಮ್ಯ, ಕದ್ದು ಮುಚ್ಚಿ, ಗಾಳಿಪಟ 2 ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರೂ ಅವರಿಗೆ ಸಿನಿಮಾಗಳಲ್ಲಿ ನಿರೀಕ್ಷಿಸಿದ ಹೆಸರು ಮಾಡಲು ಸಾಧ್ಯವಾಗಿಲ್ಲ. ಸದ್ಯ ಕಲರ್ಸ್ ಕನ್ನಡದ ದೃಷ್ಟಿಬೊಟ್ಟು ಧಾರಾವಾಹಿಯಲ್ಲಿ ನಾಯಕನ ಪಾತ್ರ ಮಾಡುತ್ತಿದ್ದಾರೆ.

ಅನುಶ್ರೀ: ಕನ್ನಡ ಕಿರುತೆರೆಯ ಸ್ಟಾರ್ ಆ್ಯಂಕರ್ ಅನುಶ್ರೀ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಗಳಿಸಿದ್ದಾರೆ. ಇವರು ಸಿನಿಮಾಗಳಲ್ಲಿ ನಟಿಸುವ ಮೂಲಕ ಅದೃಷ್ಟ ಪರೀಕ್ಷೆ ಮಾಡಿದ್ದ...