Bangalore, ಮೇ 27 -- ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿಲೋಕಸಭಾ ಸದಸ್ಯ, ಕಾಂಗ್ರೆಸ್‌ ಮುಖಂಡ ಡಿ.ಕೆ. ಸುರೇಶ್‌ ಬೆಂಗಳೂರು ಹಾಲು ಒಕ್ಕೂಟ(ಬಮೂಲ್)‌ ನಿಂದ ಕಾಂಗ್ರೆಸ್‌ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿಆರಿಸಿ ಬರುವಂತೆಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಂದು ಸುರೇಶ್‌ ಹಾದಿ ಸುಗಮವಾಗಿಲ್ಲ. ಸುರೇಶ್‌ ಅವರಿಗೆ ಅವರ ಸಹೋದರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಗುಂಪಿನ ಬೆಂಬಲವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ ಮಾಲೂರು ಶಾಸಕ ಕೆವೈ ನಂಜೇಗೌಡ ಅವರ ಪರವಾಗಿ ಬ್ಯಾಟಿಂಗ್‌ ಮಾಡುತ್ತಿದೆ.ಈಗಾಗಲೇ ಇಬ್ಬರೂ ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದು, ಈ ಘರ್ಷಣೆ ಇದುವರೆಗೂ ಬಗೆಹರಿದಿಲ್ಲ. ಜತೆಗೆ ಕೆಎಂಎಫ್‌ ನ ಹಾಲಿ ಅಧ್ಯಕ್ಷ ಭೀಮಾ ನಾಯ್ಕ್‌ ಅವರೂ ಮತ್ತೊಮ್ಮೆ ಸ್ಪರ್ಧಿಸುವುದಾಗಿ ಹೇಳಿದ್ದು ಪರಿಸ್ಥಿತಿ ಮತ್ತಷ್ಟು ಹೆಪ್ಪುಗಟ್ಟುವಂತೆ ಮಾಡಿದೆ. ಸಿದ್ದರಾಮಯ್ಯ ಅವರು ಮತ್ತೊಂದು ಅವಧಿಗೆ ಆಯ್ಕೆ ಮಾಡುವುದಾಗಿ ಭರವಸೆ ನೀಡಿದ್ದ...